ರಂಗೋಲಿ

ರಂಗೋಲಿಗೆ ಹಳೆಯ ತಲೆಮಾರಿಂದ ಬಂದ ಒಂದು ಚಿಕ್ಕ ಕಥೆ ಇದು.

ಆಯುಷ್ಯ ಮುಗಿದೊಡನೆ ಜೀವಾತ್ಮವನ್ನು ಕರೆದೊಯ್ಯಲು ಭೂಮಿಗೆ ಬರುವ ಯಮಧರ್ಮರಾಜ, ಒಮ್ಮೆ ಪತಿವ್ರತೆಯೊಬ್ಬಳ ಪತಿಯ ಪ್ರಾಣವನ್ನು ಕೊಂಡೊಯ್ಯಲು ಸೂರ್ಯ ಹುಟ್ಟುವ ವೇಳೆಗೇ ಪ್ರತ್ಯಕ್ಷನಾದನಂತೆ.

ಅಷ್ಟೊತ್ತಿಗಾಗಲೇ, ಸ್ನಾನ ಮಾಡಿ, ಮನೆಯ ಮುಂದೆ ಕಸ ಗುಡಿಸಿ, ಸಾರಿಸಿ ಸುಂದರವಾಗಿ ರಂಗೋಲಿ ಇಟ್ಟಿದ್ದ ಸಾಧ್ವಿಯ ಕಂಡು ಕಠೋರ ಹೃದಯದ ಯಮನ ಹೃದಯವೂ ಕರಗಿತಂತೆ. ಆಕೆ ಮನೆಯ ಮುಂದೆ ಹಾಕಿದ್ದ ಆ ರಂಗೋಲಿ ಯಮನನ್ನೂ ಆಕರ್ಷಿಸಿತ್ತಂತೆ.

ರಂಗೋಲಿಯ ಕಂಡು ಪ್ರಸನ್ನನಾದ ಯಮದೇವ “ವತ್ಸೆ ನಾನು ನಿನ್ನ ಪತಿಯ ಪ್ರಾಣ ಕೊಂಡೊಯ್ಯಲೆಂದೇ ಬಂದಿದ್ದೆ.

ನಿನ್ನ ಈ ಸುಂದರ ರಂಗೋಲಿ ನನ್ನನ್ನು ಆಕರ್ಷಿಸಿದೆ.“ ಸೂರ್ಯೋದಯಕ್ಕೆ ಮೊದಲೇ ಎದ್ದು ಮನೆಯ ಮುಂದೆ ರಂಗೋಲಿ ಹಾಕುವ ಮನೆಯನ್ನು ನಾನು ಪ್ರವೇಶಿಸುವುದಿಲ್ಲ ಎಂದು ಆಕೆಗೆ ವರ ಇತ್ತನಂತೆ.

ಅದಕ್ಕೇ ಅಂದಿನಿಂದ ಇಂದಿನ ವರೆಗೆ ಭಾರತ ನಾರಿಯರು ಸೂರ್ಯೋದಯಕ್ಕೆ ಮೊದಲೇ ಎದ್ದು, ಮನೆಯ ಮುಂದೆ ರಂಗೋಲಿ ಹಾಕುತ್ತಾರಂತೆ.

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು
ರಾಮಸೀತಲಕ್ಷ್ಮಣಹನುಮನಿರುವ ರಂಗವಲ್ಲಿ...🙏🙏🙏🙏🙏🙏

No comments:

Post a Comment